Ticker

6/recent/ticker-posts

Ad Code

Responsive Advertisement

*ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ 2 ಸಾವಿರ ಕೋಟಿ ರೂ. ಅನುದಾನ: ಸಿದ್ದರಾಮಯ್ಯ ಮಹತ್ವದ ಘೋಷಣೆ******


 *ಬೆಳಗಾವಿ:* ವಕ್ಫ್ ಸೇರಿದಂತೆ ಹಲವು ವಿಚಾರಗಳು ಬಿಜೆಪಿಗೆ ತಿರುಗುಬಾಣವಾಗುತ್ತಿದ್ದು, ಜನಪರ ಯೋಜನೆಗಳ ಜತೆಗೆ ಅಭಿವೃದ್ಧಿಯಲ್ಲಿ ರಾಜ್ಯ ನಿರಂತರತೆ ಕಾಯ್ದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು. ಮುಂದಿನ ವರ್ಷದಿಂದ ರಾಜ್ಯದ ಆರ್ಥಿಕ ಶಕ್ತಿ ಮತ್ತಷ್ಟು ಹೆಚ್ಚಲಿದ್ದು, ಆಗ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ. ಈ ಬಗ್ಗೆ ಪಕ್ಷದ ಸಚಿವ, ಶಾಸಕರು ಧೈರ್ಯವಾಗಿ ಎದೆಯುಬ್ಬಿಸಿ ಮಾತನಾಡಿ,'' ಎಂದು ಸಲಹೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಬೆಳಗಾವಿ ನಗರ ಹೊರವಲಯದ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿಎಂ, ''ಸದನದೊಳಗೆ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆ ಹಾಗೂ ಅಂಕಿ ಅಂಶಗಳೊಂದಿಗೆ ಧೈರ್ಯವಾಗಿ ಮಾತನಾಡಿ,'' ಎಂದು ಹುರುಪು ತುಂಬಿದ್ದಾರೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದು, ನಾಳೆಯೂ ನಮ್ಮ ಪರವಾಗಿರುತ್ತಾರೆ. ಮುಂದಿನ 2028ರ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ,'' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಚಿವರು ಮತ್ತು ಶಾಸಕರು ಉಸ್ತುವಾರಿ ಜಿಲ್ಲೆ, ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಜನಸಂಪರ್ಕ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಬೇಕು. ಹಣಕ್ಕೆ ಸಮಸ್ಯೆ ಇಲ್ಲ. ಹಣ ಇದೆ. ಜನರ ಕೆಲಸ ಮಾಡಿ. ಬಿಜೆಪಿಯವರು ಆರೋಪಿಸುವಂತೆ ಆರ್ಥಿಕವಾಗಿ ರಾಜ್ಯ ಹಿನ್ನಡೆಯಾಗಿದ್ದರೆ, ಜಿಎಸ್‌ಟಿ ಸಂಗ್ರಹದಲ್ಲಿ ಮೊದಲ ಸ್ಥಾನಕ್ಕೆ ಹೇಗೆ ಬರುತ್ತಿತ್ತು? ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ'' ಎಂದು ಹೇಳಿದರು.

Post a Comment

0 Comments