Ticker

6/recent/ticker-posts

Ad Code

Responsive Advertisement

*ಕಟ್ಟಡ ಕಲ್ಲು, ಮೈನಿಂಗ್ ಸ್ಟೋನ್ ರಾಯಲ್ಟಿ ಹೆಚ್ಚಳ: ಹೊಸ ಮನೆ ಕಟ್ಟುವವರ ಕನಸು ದುಬಾರಿ*****


*ಬೆಂಗಳೂರು:* ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ  ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಮಾಡಲಾಗಿದೆ. ಶಾಸಕರು, ಸಚಿವರು ಭಾಗಿಯಾಗಿದ್ದರು. 20 ವಿಷಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಕಟ್ಟಡ ಕಲ್ಲು, ಮೈನಿಂಗ್ ಸ್ಟೋನ್ ರಾಯಲ್ಟಿ ಹೆಚ್ಚಿಸಲಾಗಿದೆ. ಆ ಮೂಲಕ ಕಟ್ಟಡ ನಿರ್ಮಾಣದ ಕನಸಿಗೆ ಬೆಲೆ ಏರಿಕೆಯ ಹೊರೆ ತಟ್ಟಿದೆ. ಸಚಿವ ಸಂಪುಟ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಉಪ ಖನಿಜ ರಿಯಾಯಿತಿ ನಿಯಮ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ. ಅಕ್ರಮ ಕಲ್ಲು ಗಣಿಗಾರಿಕೆ ವಿಚಾರದ ಬಗ್ಗೆ ಚರ್ಚೆಯಾಗಿದೆ. ರಾಯಲ್ಟಿ ಪರಿಷ್ಕರಣೆ ಮಾಡಲು ಸಂಪುಟ ಸಭೆ ಸಮ್ಮತಿಸಿದೆ. ಸರ್ಕಾರದ ಆದಾಯ ಹೆಚ್ಚಳಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಗ್ಯಾರೆಂಟಿಗಳಿಗೇನು ಹಣದ ಕೊರತೆಯಿಲ್ಲ ಆದರೆ ಅಭಿವೃದ್ಧಿ ಕೆಲಸಗಳು ಆಗಬೇಕಲ್ಲ ಹಾಗಾಗಿ ರಾಯಲ್ಟಿ, ತೆರಿಗೆ ಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕಟ್ಟಡ ಕಲ್ಲು, ಮೈನಿಂಗ್ ಕಲ್ಲು ಪ್ರತಿ ಟನ್​ಗೆ 80 ರೂ. ರಾಯಲ್ಟಿ ನಿಗದಿಯಿಂದ 311.55 ಕೋಟಿ ರೂ. ಹೆಚ್ಚುವರಿ ಸಂಗ್ರಹವಾಗಿದೆ. ಮೊದಲು ಮೆಟ್ರಿಕ್ ಟನ್​ಗೆ 20 ರೂ. ರಾಯಲ್ಟಿ ನಿಗದಿಯಾಗಿತ್ತು. ಈಗ ಪ್ರತಿ ಮೆಟ್ರಿಕ್ ಕಲ್ಲಿಗೆ 10 ರೂ. ರಾಯಲ್ಟಿ ಹೆಚ್ಚಿಸಲಾಗಿದೆ. ರಾಯಲ್ಟಿ ಪಾವತಿಸದೆ ಖನಿಜ ಸಾಗಣೆ ಮಾಡಿದರೆ ದಂಡ ವಸೂಲಿಗೆ ನಿರ್ಧರಿಸಲಾಗಿದೆ. 6,105 ರೂಪಾಯಿ ದಂಡ ವಿಧಿಸಲಾಗಿತ್ತು. ಕಳೆದ 6-7 ವರ್ಷಗಳಿಂದ ದಂಡ ವಸೂಲಿಯಾಗಿಲ್ಲ, ಬಾಕಿಯಿದೆ. ಹಾಗಾಗಿ ಒನ್​ಟೈಮ್ ಸೆಟ್ಲ್​ಮೆಂಟ್​ಗೆ ಅವಕಾಶ ನೀಡಲಾಗಿದೆ ಗಣಿಗಾರಿಕೆ‌ ನಡೆಸುವವರು ಕಳೆದ ಐದು ವರ್ಷಗಳಿಂದ ದಂಡ ಕಟ್ಟಿಲ್ಲ. ಅದನ್ನ ವಸೂಲಿ‌ ಮಾಡಲು ಈ ತೀರ್ಮಾನ ಮಾಡಲಾಗಿದೆ. ಡಿಜಿಟಲ್ ಮಾಡಿದ ಮೇಲೆ ಎನ್ ಕ್ರೋಚ್ ಸಾಧ್ಯವಾಗುತ್ತಿಲ್ಲ. ಒಟಿಎಸ್ ಮೂಲಕ ದಂಡ ವಸೂಲಿಗೆ ಕ್ರಮಕೈಗೊಳ್ಳಲಾಗುತ್ತಿದೆ.

Post a Comment

0 Comments