Ticker

6/recent/ticker-posts

Ad Code

Responsive Advertisement

*ರಾಜ್ಯದ ಇತಿಹಾಸದಲ್ಲೇ ಮೊದಲ: ಕರ್ನಾಟಕದಲ್ಲಿ ಸಬ್ ರಿಜಿಸ್ಟರ್ ವರ್ಗಾವಣೆಗೆ ಹೊಸ ನಿಯಮ*******


*ಬೆಂಗಳೂರು:* ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ ಉಪ ನೋಂದಣಾಧಿಕಾರಿಗಳ ವರ್ಗಾವಣೆ ಜಾರಿ ಮಾಡಲಾಗಿದೆ. ಆ ಮೂಲಕ ವರ್ಗಾವಣೆಯಲ್ಲಿ ಭ್ರಷ್ಟಾಚಾರ ತಡೆಗೆ ನಿರ್ಣಾಯಕ ಕ್ರಮಕೈಗೊಳ್ಳಲಾಗಿದೆ. ಕಂದಾಯ ಇಲಾಖೆಯಲ್ಲಿ ವರ್ಗಾವಣೆ ಇತಿಹಾಸದಲ್ಲೇ ಇದು ಮೊದಲ ಪ್ರಯತ್ನವಾಗಿದ್ದು, ಒಂದು ರೂಪಾಯಿ ಭ್ರಷ್ಟಾಚಾರದ ಆರೋಪವಿಲ್ಲದೆ ವರ್ಗಾವಣೆಗೆ ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ 31 ಜಿಲ್ಲೆಯ 90 ನೋಂದಣಾಧಿಕಾರಿಗಳ ವರ್ಗಾವಣೆಗೆ ಇಂದು ಅಂಕಿತ ಹಾಕಲಾಗಿದೆ. ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ ಬಗ್ಗೆ ಈ ಹಿಂದೆ ಹಲವು ಬಾರಿ ದೂರುಗಳು ಕೇಳಿಬಂದಿದ್ದವು. ವರ್ಗಾವಣೆ ದಂಧೆಯ ಬಗ್ಗೆ ಹಲವು ನಾಯಕರು ಸದನದಲ್ಲೇ ಧ್ವನಿ ಎತ್ತಿದ್ದರು. ಹೀಗಾಗಿ ಈ ಎಲ್ಲಾ ಅವ್ಯವಹಾರಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡರಿಂದ ದಿಟ್ಟ ಹೆಜ್ಜೆ ಇಡಲಾಗಿದ್ದು, ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್‌ ಮೂಲಕ ನಡೆಸುವುದಾಗಿ ಭರವಸೆ ನೀಡಲಾಗಿತ್ತು. ಇಂದು ರಾಜ್ಯದ 31 ಜಿಲ್ಲೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪ ನೋಂದಣಿ ಕಚೇರಿಗಳಲ್ಲಿ ನೋಂದಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ 90 ಜನ ಕೇಂದ್ರಸ್ಥಾನ ಸಹಾಯಕರು, ಹಿರಿಯ ಉಪನೋಂದಣಾಧಿಕಾರಿಗಳನ್ನು ಇಂದು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ. ಮಹೇಶ್‌ ಅವರ ನೇತೃತ್ವದಲ್ಲಿ ನವೆಂಬರ್‌ 04ರಿಂದಲೇ ಕೌನ್ಸಿಲಿಂಗ್‌ ನಡೆಸಲಾಗಿತ್ತು. ಈ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿ ಸ್ವ-ಇಚ್ಚೆಯಿಂದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರ ಆಯ್ಕೆಯನ್ನು ಆಧರಿಸಿ ವರ್ಗಾಯಿಸಿ ಆದೇಶಿಸಲಾಗಿದೆ.

Post a Comment

0 Comments