Ticker

6/recent/ticker-posts

Ad Code

Responsive Advertisement

*ಹೀರೋ ಟು ವಿಲನ್; ವಿಶ್ವಕಪ್ ಹೀರೋ ಯುವಿ ಮನೆ ಮೇಲೆ ನಡೆದಿತ್ತು ಕಲ್ಲು ತೂರಾಟ**********


ಭಾರತವನ್ನು ಎರಡೆರಡು ಮಾದರಿಗಳಲ್ಲಿ ವಿಶ್ವ ಚಾಂಪಿಯನ್‌ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಇಂದು ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 2000 ನೇ ಇಸವಿಯಲ್ಲಿ ಭಾರತ ಕ್ರಿಕೆಟ್​ಗೆ ಕಾಲಿಟ್ಟಿದ್ದ ಯುವಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಹಾಗೂ 2011 ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಅನ್ನು ಟೀಂ ಇಂಡಿಯಾ ಗೆದ್ದುಕೊಳ್ಳುವಲ್ಲಿ ಸಾಕಷ್ಟು ಕೊಡುಗೆ ನೀಡಿದ್ದರು. ಈ ಎರಡು ವಿಶ್ವಕಪ್​ಗಳಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡಲ್ಲೂ ಯುವಿ ಅಮೋಘ ಪ್ರದರ್ಶನ ನೀಡಿದ್ದರು. ಅದರಲ್ಲೂ ಬ್ಯಾಟಿಂಗ್​ನಲ್ಲಿ ಸುನಾಮಿಯನ್ನೇ ಎಬ್ಬಿಸಿದ್ದ ಯುವಿ ರನ್​ಗಳ ಗುಡ್ಡೆ ಹಾಕಿದ್ದರು. ಆದಾಗ್ಯೂ ಕೇವಲ 3 ವರ್ಷಗಳ ನಂತರ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ತಮ್ಮ ಆಮೆಗತಿಯ ಬ್ಯಾಟಿಂಗ್​ನಿಂದಾಗಿ ತಂಡದ ಸೋಲಿಗೆ ಯುವಿ ಕಾರಣರಾಗಿದ್ದರು. ಇದರಿಂದಾಗಿ ಅವರ ಮನೆಯ ಮೇಲೆ ಅಭಿಮಾನಿಗಳು ಕಲ್ಲು ತೂರಾಟ ಕೂಡ ನಡೆಸಿದ್ದರು. ವಾಸ್ತವವಾಗಿ ಕ್ರಿಕೆಟ್​ ಲೋಕದಲ್ಲಿ ಯುವರಾಜ್ ಸಿಂಗ್ ಅವರನ್ನು ಸಿಕ್ಸರ್ ಕಿಂಗ್ ಎಂದು ಕರೆಯಲಾಗುತ್ತದೆ. 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿದ ವಿಶ್ವದಾಖಲೆ ಅವರ ಹೆಸರಿನಲ್ಲಿದೆ. ಅಲ್ಲದೆ ಅವರು ಕೇವಲ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ದಾಖಲೆಯನ್ನೂ ನಿರ್ಮಿಸಿದ್ದಾರೆ. ಆದರೆ ಏಪ್ರಿಲ್ 6, 2014 ರ ರಾತ್ರಿ, ಬಹುಶಃ ಯುವರಾಜ್ ಸಿಂಗ್ ಅವರ ವೃತ್ತಿಜೀವನದ ಕೆಟ್ಟ ದಿನವಾಗಿತ್ತು ಎಂದು ಹೇಳಿದರೆ ತಪ್ಪಾಗಲಾರದು. ಅಂದು ಮೀರ್‌ಪುರದ ಮೈದಾನದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯ ನಡೆದಿತ್ತು. ಇದೇ ಪಂದ್ಯದಲ್ಲಿ ಯುವರಾಜ್ ಸಿಂಗ್ ತಮ್ಮ ಆಮೆಗತಿಯ ಬ್ಯಾಟಿಂಗ್​ನಿಂದಾಗಿ ಟೀಂ ಇಂಡಿಯಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಟಿ20 ಮಾದರಿಯಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈಯುತ್ತಿದ್ದ ಯುವರಾಜ್ ಸಿಂಗ್ ಅಂದು ಶ್ರೀಲಂಕಾ ವಿರುದ್ಧ ನಡೆದಿದ್ದ ಫೈನಲ್ ಪಂದ್ಯದಲ್ಲಿ ಮಾತ್ರ ಬರೋಬ್ಬರಿ 21 ಎಸೆತಗಳನ್ನು ಆಡಿ 52.38 ರ ಸ್ಟ್ರೈಕ್ ರೇಟ್​ನಲ್ಲಿ ಕೇವಲ 11 ರನ್ ಗಳಿಸಿದ್ದರು. ಅಚ್ಚರಿಯೆಂದರೆ ಈ ಪಂದ್ಯದಲ್ಲಿ 11 ನೇ ಓವರ್‌ನಲ್ಲೇ ಕ್ರೀಸ್‌ಗೆ ಬಂದ ಯುವಿ, ಅಂತಿಮವಾಗಿ 19ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು. ಈ ನಡುವೆ 21 ಎಸೆತಗಳನ್ನಾಡಿದ ಯುವಿ ಬರೋಬ್ಬರಿ 9 ಡಾಟ್ ಬಾಲ್‌ಗಳನ್ನು ಆಡಿದ್ದರು.

Post a Comment

0 Comments