Ticker

6/recent/ticker-posts

Ad Code

Responsive Advertisement

*ಶುಗರ್ ಲೆವೆಲ್ ಕಂಟ್ರೋಲ್ ಆಗ್ಬೇಕು ಅಂದ್ರೆ ಈ ತರಕಾರಿಯನ್ನು ನಿತ್ಯ ಸೇವಿಸಿ*


ಇತ್ತೀಚೆಗಿನ ದಿನಗಳಲ್ಲಿ ಮಧುಮೇಹಿ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧವರೆಗೂ ಈ ಕಾಯಿಲೆಯೂ ಕಾಡುತ್ತಿದೆ. ಈ ಆರೋಗ್ಯ ಸಮಸ್ಯೆಯಿರುವವರು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ಸೇವಿಸುವ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಹೀಗಾಗಿ ಈ ಸೌತೆಕಾಯಿಯನ್ನು ಆಹಾರ ಭಾಗವಾಗಿ ಮಾಡಿಕೊಳ್ಳುವುದು ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬಹಳಷ್ಟು ಪ್ರಯೋಜನಕಾರಿಯಾಗಿದೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮೂತ್ರ ವಿಸರ್ಜನೆಯ ಸಮಸ್ಯೆಯೂ ಹೆಚ್ಚಾಗಿ ಕಾಡುತ್ತದೆ. ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಹೀಗಾಗಿ ಸೌತೆಕಾಯಿಯಲ್ಲಿ ನಿಯಮಿತವಾದ ಸೇವನೆಯೂ ದೇಹದಲ್ಲಿನ ನೀರಿನ ಕೊರತೆಯನ್ನು ನೀಗಿಸುತ್ತದೆ. ಸಾಮಾನ್ಯವಾಗಿ ತೂಕ ಹೆಚ್ಚಾಗುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವ ಸಾಧ್ಯತೆಯಿರುತ್ತದೆ. ಹೀಗಾಗಿ ಸೌತೆಕಾಯಿಯನ್ನು ಸೇವಿಸುವುದರಿಂದ ಬೊಜ್ಜು ನಿವಾರಣೆಯಾಗಿ ತೂಕವನ್ನು ನಿಯಂತ್ರಿಸುತ್ತದೆ. ಒಂದು ವೇಳೆ ದೇಹದಲ್ಲಿ ಬೊಜ್ಜು ಹೆಚ್ಚಾದರೆ ಸಕ್ಕರೆ ಕಾಯಿಲೆ ಬರುವ ಸಾಧ್ಯತೆಯಿದ್ದು, ಈ ತರಕಾರಿಯೂ ಬೊಜ್ಜಿನ ಅಪಾಯವನ್ನು ಕಡಿಮೆ ಮಾಡುತ್ತದೆ ಸೌತೆಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಇದರ ನಿಯಮಿತ ಸೇವನೆಯೂ ದೇಹಕ್ಕೆ ಶಕ್ತಿಯನ್ನು ನೀಡುವುದರೊಂದಿಗೆ ದೀರ್ಘಕಾಲದ ಕಾಯಿಲೆಗಳ ಅಪಾಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಮದುಮೇಹಿಗಳಲ್ಲಿ ಕಣ್ಣಿನ ಸಮಸ್ಯೆಯೂ ಹೆಚ್ಚಿರುತ್ತದೆ. ಆದರೆ ಈ ಸೌತೆಕಾಯಿಯಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು, ಇದರ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಕಣ್ಣಿನ ದೃಷ್ಟಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಸೌತೆಕಾಯಿ ಸೂಪ್ ಮಾಡಿ ಸೇವಿಸುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಹೀಗಾಗಿ ಕತ್ತರಿಸಿಟ್ಟ ಸೌತೆಕಾಯಿಗೆ ಒಂದೆರಡು ಚಮಚ ನಿಂಬೆ ರಸ, ಒಂದು ಈರುಳ್ಳಿ, ಬೆಳ್ಳುಳ್ಳಿ, ಕಾಲು ಚಮಚ ಆಲಿವ್ ಎಣ್ಣೆ, ಅರ್ಧ ಕಪ್ ಕೊತ್ತಂಬರಿ ಸೊಪ್ಪು, ಒಂದು ಚಮಚ ಜೀರಿಗೆ, ಉಪ್ಪು ಮತ್ತು ಮೆಣಸು ಪುಡಿ ಸೇರಿಸಿ ಮಿಶ್ರಣ ಮಾಡಿಕೊಳ್ಳಿ. ಅಗತ್ಯವಿದ್ದಷ್ಟು ಮೊಸರು ಸೇರಿಸಿ ಸೇವಿಸಿದರೆ ಆರೋಗ್ಯದಲ್ಲಿ ಬದಲಾವಣೆವನ್ನು ಕಾಣಬಹುದು.

Post a Comment

0 Comments