ಬೈಂದೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬೈಂದೂರು ಬ್ಲಾಕ್ ಕಾಂಗ್ರೆಸ್ ವಿವಿಧ ಘಟಕಗಳ ವತಿಯಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಶ್ರೀಯುತ ಗೋಪಾಲ್ ಪೂಜಾರಿ ರವರ ನೇತೃತ್ವದಲ್ಲಿ , ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಿರುದ್ಧ ಸಂಸತ್ ನಲ್ಲಿಕೇಂದ್ರ ಗೃಹಸಚಿವರಾದ ಅಮಿತ್ ಶಾ ರವರು ಅವಹೇಳನಕಾರಿ ಭಾಷಣ ಮಾಡಿದ ಸಚಿವರನ್ನು ,ಹಾಗೂ ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮೇಡಂ ರವರಿಗೆ ಬಿಜೆಪಿಯ ಎಂಎಲ್ಸಿ ಸಿ.ಟಿ ರವಿಯವರು ಅವಾಚ್ಯ ಶಬ್ದ ಪದಬಳಕೆ ಮಾಡಿರುವ ಇಬ್ಬರು ಬಿಜೆಪಿ ನಾಯಕರು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ. ಕಾನೂನಾತ್ಮಕವಾಗಿ ಇಬ್ಬರಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕುಎಂದು ಬೈಂದೂರಿನಲ್ಲಿ ಪ್ರತಿಭಟನೆ ಮಾಡಲಾಯಿತು, ಬೈಂದೂರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀಯುತ ಮದನ್ ಕುಮಾರ್, ಕಾಂಗ್ರೆಸ್ ಪಕ್ಷದ ನಾಯಕರದ ಗಣೇಶ್ ಪೂಜಾರಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು, . ಈ ಸಂದರ್ಭದಲ್ಲಿ ಬೈಂದೂರು ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಎಲ್ಲಾ ನಾಯಕರು ಹಾಗೂ ಪಕ್ಷದ ಯುವ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಪಾಲ್ಗೊಂಡರು .
0 Comments