Ticker

6/recent/ticker-posts

Ad Code

Responsive Advertisement

*ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್‌*


*ಮಂಗಳೂರು:* ಮಂಗಳೂರಿನ ಕೋಟೆಕಾರ್ ಬ್ಯಾಂಕ್​​ನಲ್ಲಿ ಚಿನ್ನಾಭರಣ, ನಗದು ದರೋಡೆ ಕೇಸ್​ಗೆ ಸಂಬಂಧಿಸಿದಂತೆ ಬ್ಯಾಂಕ್ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಣ್ಣನ್​ಮಣಿ ಕಾಲಿಗೆ ಫೈರಿಂಗ್​ ಮಾಡಲಾಗಿದೆ. ನಿನ್ನೆ ತಮಿಳುನಾಡಿನ ತಿರುವನ್ವೇಲಿ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ತಮಿಳುನಾಡಿನಿಂದ ಆರೋಪಿಗಳನ್ನ ಮಂಗಳೂರಿನ ಕೆ.ಸಿ.ರೋಡ್​ಗೆ ಮಹಜರು ಮಾಡಲು ಕರೆತರಲಾಗುತ್ತಿತ್ತು. ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿಯನ್ನ ನಿನ್ನೆ ತಮಿಳುನಾಡಿನ ತಿರುವನ್ವೇಲಿಯಲ್ಲಿ ಬಂಧಿಸಿದ್ದ ಪೊಲೀರು ಇಂದು ರಾಜ್ಯಕ್ಕೆ ಕರೆದುಕೊಂಡು ಬರುತ್ತಿದ್ದರು. ಆದರೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಅಲಂಕಾರು ಗುಡ್ಡ ಬಳಿ ಆರೋಪಿ ಕಣ್ಣನ್‌ಮಣಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಇನ್ಸ್‌ಪೆಕ್ಟರ್‌ ರಫೀಕ್‌, ಆರೋಪಿ ಮೇಲೆ ಫೈರಿಂಗ್‌ ಮಾಡಿದ್ದಾರೆ. ಸದ್ಯ ಆತನನ್ನ ದೇರಳಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Post a Comment

0 Comments