ಮುಂಬೈ : ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮ ವಿಕೆಟ್ ಬಿದ್ದಾಗ ʼಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆಯನ್ನು ಕೂಗಿದ್ದ ಮುಸ್ಲಿಂ ವ್ಯಕ್ತಿಗೆ ಸೇರಿದ ಗುಜರಿ ಅಂಗಡಿಯನ್ನು ಬುಲ್ಡೋಜರ್ನಿಂದ ಧ್ವಂಸಗೊಳಿಸಲಾಗಿದೆ.
ಮಹಾರಾಷ್ಟ್ರದ ಮಾಲ್ವಾನ್ನಲ್ಲಿ ಈ ಘಟನೆ ನಡೆದಿದೆ. ಪಂದ್ಯದ ವೇಳೆ ಪಾಕ್ ಪರ ಘೋಷಣೆ ಕೂಗಿದ್ದ ಇಬ್ಬರು ವ್ಯಕ್ತಿಗಳನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಅನಂತರ ಸ್ಥಳದಲ್ಲಿ ಬಿಗುವಿನ ವಾತಾವಾರಣ ನಿರ್ಮಾಣವಾಗಿತ್ತು. ಪಾಕ್ ಪರ ಘೋಷಣೆಯನ್ನು ಪ್ರತಿಭಟಿಸಿ ಸ್ಥಳೀಯರು ಸೋಮವಾರ ಬೈಕ್ ರ್ಯಾಲಿ ಕೂಡಾ ಮಾಡಿದ್ದರು. ಈ ನಡುವೆ ಪಾಕ್ ಪರ ಘೋಷಣೆ ಕೂಗಿದ್ದ ವಲಸಿಗ ವ್ಯಕ್ತಿ ಅಕ್ರಮವಾಗಿ ನಿರ್ಮಿಸಿದ್ದ ಗುಜರಿ ಅಂಗಡಿಯನ್ನು ಮಾಲ್ವಾನ್ ಪುರಸಭೆ ಬುಲ್ಡೋಜರ್ ನಿಂದ ಧ್ವಂಸಗೊಳಿಸಿದೆ.
ಶಿವಸೇನಾ ನಾಯಕ ನೀಲೇಶ್ ರಾಣಿ ಇದರ ವೀಡಿಯೋವನ್ನು ಎಕ್ಸ್ನಲ್ಲಿ ಶೇರ್ ಮಾಡಿದ್ದಾರೆ.
0 Comments