Ticker

6/recent/ticker-posts

Ad Code

Responsive Advertisement

*ವಿಜಯೇಂದ್ರ ವಿರುದ್ಧ ಯತ್ನಾಳ್ ಬಣ ಗೆರಿಲ್ಲಾ ಯುದ್ಧ! ದಲಿತ, ಒಬಿಸಿ ಆಯ್ತು ಈಗ ಲಿಂಗಾಯತ ಅಸ್ತ್ರ******


*ನವದೆಹಲಿ:* ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರರನ್ನು ಕೆಳಗಿಳಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಣ ಶಪಥ ಮಾಡಿದೆ. ಇದರ ಭಾಗವಾಗಿ ಮಂಗಳವಾರ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಕುಮಾರ್ ಬಂಗಾರಪ್ಪ ಹೈಕಮಾಂಡ್ ನಾಯಕರ ಬಳಿ ದೂರು ಕೊಟ್ಟಿದ್ದರು. ಈ ಮೂಲಕ ಇಡೀ ತಂಡ ದಲಿತ ಹಾಗೂ ಒಬಿಸಿ ಅಸ್ತ್ರ ಪ್ರಯೋಗವನ್ನು ಯಶಸ್ವಿಯಾಗಿ ಮಾಡಿತ್ತು. ಇದೀಗ ಯತ್ನಾಳ್ ತಂಡ ಲಿಂಗಾಯತ ಬ್ರಹ್ಮಾಸ್ತ್ರ ಬಿಡುವುದಕ್ಕೆ ಸಜ್ಜಾಗಿದೆ. ಯತ್ನಾಳ್ ಮತ್ತು ಮಾಜಿ ಸಂಸದ ಸಿದ್ದೇಶ್ವರ್ ನೇತೃತ್ವದಲ್ಲಿ ವರಿಷ್ಠರ ಭೇಟಿಗೆ ಯತ್ನಿಸುತ್ತಿದೆ.ಇಡೀ ಲಿಂಗಾಯತ ಸಮುದಾಯ ಬಿವೈ ವಿಜಯೇಂದ್ರ ಹಿಂದೆ ಇಲ್ಲ. ಬಿಎಸ್ ಯಡಿಯೂರಪ್ಪನವರ ವರ್ಚಸ್ಸು ವಿಜಯೇಂದ್ರಗೆ ಇಲ್ಲ. ವಿಜಯೇಂದ್ರ ಬದಲಿಸಿದರೆ ಯಾವುದೇ ಹಿನ್ನಡೆ ಆಗುವುದಿಲ್ಲ ಎನ್ನುವ ಬಣ, ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಬದಲಿಸುವಂತೆ ಮನವಿ ಮಾಡಲಿದೆ. ಇದರ ಜತೆಗೆ ಯತ್ನಾಳ್ ಬಣಕ್ಕೆ ತಟಸ್ಥ ಗುಂಪಿನಲ್ಲಿರುವ ನಾಯಕರು ಕೂಡ ಬೆಂಬಲ ಕೊಟ್ಟಿದ್ದಾರೆ. ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ವರಿಷ್ಠರಿಗೆ ಸಂದೇಶ ರವಾನಿಸಲಿದ್ದಾರೆ. ಈ ಮಧ್ಯೆ ಮತ್ತೊಂದು ದಾಳ ಉರುಳಿಸಿರುವ ಯತ್ನಾಳ್ ಬಣ, ವಿಜಯೇಂದ್ರ ವಿರುದ್ಧದ ಹೋರಾಟಕ್ಕೆ ನೇತೃತ್ವ ವಹಿಸುವಂತೆ ಸಂಸದ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದೆ. ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಈ ಬಗ್ಗೆ ನೀವೇ ಹೈಕಮಾಂಡ್ ನಾಯಕರ ಜೊತೆ ಮಾಡನಾಡಿ ಎಂದು ಯತ್ನಾಳ್ ಬಣದ ಶಾಸಕರು ಹೇಳಿದ್ದಾರೆ ಎನ್ನಲಾಗಿದೆ.

Post a Comment

0 Comments