Ticker

6/recent/ticker-posts

Ad Code

Responsive Advertisement

*ರನ್ಯಾ ಚಿನ್ನ ಕಳ್ಳಸಾಗಣೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರೊಟೊಕಾಲ್ ಬಿಗಿ, ಅಧಿಕಾರಿಗಳ ಸಂಬಂಧಿಕರಿಗಿಲ್ಲ ವಿಶೇಷ ವಿನಾಯಿತಿ******


*ಬೆಂಗಳೂರು:* ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್  ಬಂಧನದ ಬಳಿಕ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪ್ರೊಟೊಕಾಲ್ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ವಿಶೇಷವಾಗಿ, ಪ್ರಭಾವಿ ಹಿನ್ನೆಲೆ ಹೊಂದಿರುವ ವ್ಯಕ್ತಿಗಳಿಗೆ ಕಠಿಣ ಭದ್ರತಾ ಶಿಷ್ಟಾಚಾರಗಳನ್ನು ಪರಿಚಯಿಸಲಾಗಿದೆ. ಇನ್ನುಮುಂದೆ ಶಿಷ್ಟಾಚಾರ ಸವಲತ್ತುಗಳನ್ನು ಹಿರಿಯ ಅಧಿಕಾರಿಗಳಿಗೆ ಮಾತ್ರ ನೀಡಲಾಗುವುದು. ಅವರ ಕುಟುಂಬ ಸದಸ್ಯರು ಅಥವಾ ಪರಿಚಯಸ್ಥರಿಗೆ ನೀಡಲಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿದೆ ಎಂದು ವರದಿಯಾಗಿದೆ. ನಿಯೋಜಿತ ಅಧಿಕಾರಿ ಐಪಿಎಸ್ ಆಗಿರಲಿ ಅಥವಾ ಐಎಎಸ್ ಆಗಿರಲಿ, ಅವರನ್ನು ಬಿಟ್ಟು ಅವರ ಕುಟುಂಬದವರಾಗಲೀ, ಇತರ ಯಾರಿಗೇ ಆಗಲಿ ಭದ್ರತಾ ಶಿಷ್ಟಾಚಾರವನ್ನು ಒದಗಿಸಲು ಅವಕಾಶವಿಲ್ಲ. ಅಧಿಕಾರಿಗೆ ನೇರ ಬೆದರಿಕೆ ಇದ್ದಾಗ ಮಾತ್ರ ಹೆಚ್ಚುವರಿ ಭದ್ರತೆಯನ್ನು ಪರಿಗಣಿಸಲಾಗುತ್ತದೆ. ಅಂಥ ಸಂದರ್ಭದಲ್ಲೂ ಅವರ ಅತೀ ಹತ್ತಿರದ ಸಂಬಂಧಿಗಷ್ಟೇ ಒದಗಿಸಲಾಗುತ್ತದೆ ಎದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್ಆರ್ ಉಮಾಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments