*ಬೆಂಗಳೂರು:* ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ ಕಳೆದ ಬುಧವಾರ (ಮೇ.21) ಆದೇಶ ಹೊರಡಿಸಿತ್ತು. ಈ ಆದೇಶ ಹಿಂಪಡೆಯುವಂತೆ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್ನ ಆದೇಶದಂತೆ ಪ್ರಭಾರ ಡಿಜಿ-ಐಜಿಪಿ ನೇಮಿಸುವಂತಿಲ್ಲ. ಯಾವುದೇ ವಿಶೇಷ ಕಾರಣ ನೀಡದೆ, ಅವಧಿ ಉಲ್ಲೇಖಿಸದೆ ಡಿಜಿ-ಐಜಿಪಿ ನೇಮಕ ಮಾಡಲಾಗಿದೆ. ಈ ಮೂಲಕ ಸಂವಿಧಾನ ಮತ್ತು ಕಾನೂನು ಉಲ್ಲಂಘಿಸಲಾಗಿದೆ. ಹೀಗಾಗಿ. ಡಾ. ಎಂ.ಎ.ಸಲೀಂ ಅವರ ನೇಮಕಾತಿ ಹಿಂಪಡೆಯಬೇಕು. ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ನೇಮಕ ಮಾಡಲಿ. ಏಳು ದಿನಗಳಲ್ಲಿ ನಿಯಮ ಪಾಲಿಸದಿದ್ದರೆ ಪಿಐಎಲ್ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಎ ಸಲೀಂ ಅವರನ್ನು ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಅವರ ಸೇವಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಡಾ. ಎಂ. ಎ ಸಲೀಂ ಅವರನ್ನು ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಿದೆ. ಈ ನೇಮಕವನ್ನು ಪ್ರಶ್ನಿಸಿ ವಕೀಲೆಯೊಬ್ಬರು ಸರ್ಕಾರದ ಸಿಎಸ್ಗೆ ಪತ್ರ ಬರೆದಿದ್ದಾರೆ.
0 Comments