*ವಿಜಯಪುರ:* ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರನ್ನು ಪಕ್ಷದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ವಿಜಯಪುರದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರಿಬ್ಬರ ರಕ್ಷಣೆಗಾಗಿ ವಿಜಯೇಂದ್ರ ಮತ್ತು ಯಡಿಯೂರಪ್ಪ ಬಹಳ ಪ್ರಯತ್ನ ಮಾಡಿದರು, ಪಕ್ಷದಿಂದ ಯಾರಾದರೂ ಹೊರಗೆ ಹೋಗೋದಾದರೆ ಅದು ಯತ್ನಾಳ್ ಮಾತ್ರ ನಿಮಗೇನೂ ಆಗಲ್ಲ ಅಂತ ಭರವಸೆ ನೀಡಿದ್ದರು, ಆದರೆ ಅವರನ್ನು ಉಳಿಸಿಕೊಳ್ಳುವಲ್ಲಿ ತಂದೆ-ಮಗ ವಿಫಲರಾದರು ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷನ ಚುನಾವಣೆ ಬಗ್ಗೆ ಮಾತಾಡಿದ ಯತ್ನಾಳ್, ಪಾಕಿಸ್ತಾನದ ಮೇಲೆ ನಡೆದ ಯುದ್ಧದ ಕಾರಣ ಮುಂದೂಡಿರಬಹುದು, ಇಷ್ಟರಲ್ಲೇ ಆಗಬಹುದು ಎಂದು ಹೇಳಿದರು.
0 Comments