*ಬೆಂಗಳೂರು:* ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕದಲ್ಲಿ ಜಿಲ್ಲೆಗೆ ಒಂದು ಉಪನೋಂದಣಾಧಿಕಾರಿಗಳ ಕಚೇರಿಯು 2 ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ. ಇನ್ನು ರಜಾ ದಿನ ಕಾರ್ಯನಿರ್ವಹಿಸುವ ಉಪನೋಂದಣಾಧಿಕಾರಿಗಳ ಕಚೇರಿಗೆ ಮಂಗಳವಾರ ರಜಾ ದಿನ ಎಂದು ಘೋಷಿಸಿ ಆದೇಶಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಬಸವನಗುಡಿ ಉಪನೋಂದಣಾಧಿಕಾರಿಗಳ ಕಚೇರಿ, ಗಾಂಧಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಜಯನಗರ ಉಪನೋಂದಣಾಧಿಕಾರಿಗಳ ಕಚೇರಿ, ರಾಜಾಜಿನಗರದ ಮಾದನಾಯಕನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಶಿವಾಜಿನಗರ ಉಪನೋಂದಣಾಧಿಕಾರಿಗಳ ಕಚೇರಿಗಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ ಕೆಲಸದ ದಿನ ಮತ್ತು ರಜಾ ದಿನಗಳಂದೂ ಕಾರ್ಯ ನಿರ್ವಹಿಸಲಿವೆ. ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳು ದಿನಾಂಕ:01-06-2025 ರಿಂದ 28-12-2025 ರ ವರೆಗೆ ಬರುವ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾದಿನಗಳಂದು ಅನುಬಂಧದಲ್ಲಿ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಅದರಂತೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದೆ ಹಾಗೂ ನಿಗಧಿಪಡಿಸಿದ ದಿನಾಂಕಗಳಂದು ಕರ್ತವ್ಯ ನಿರ್ವಹಿಸಿದ ಉಪನೋಂದಣಾಧಿಕಾರಿಗಳು ಕಛೇರಿಗೆ ಕಾರ್ಯನಿರ್ವಹಿಸಿದ ರಜಾ ದಿನದಲ್ಲಿ ತಕ್ಷಣ ಬರುವ ಮುಂದಿನ ಮಂಗಳವಾರ ದಿನವನ್ನು ರಜಾ ದಿನವೆಂದು ಘೋಷಿಸಿದೆ. Yogesh shiruru
0 Comments