*ಬೆಂಗಳೂರು:* ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಸಾಹಿತಿ ಡಾ ಹೆಚ್ ಎಸ್ ವೆಂಕಟೇಶ ಮೂರ್ತಿ ಬೆಂಗಳೂರಿನ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 80 ವರ್ಷವಾಗಿತ್ತು.
ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ ಜನಪ್ರಿಯರಾಗಿರುವ ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಎಚ್ಎಸ್ವಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದಿದ್ದಾರೆ.
ಡಾ ಹೆಚ್ ಎಸ್ ವೆಂಕಟೇಶ ಮೂರ್ತಿಯವರು ನವೋದಯ ಕಾಲದ ಬರಹಗಾರರು ಮತ್ತು ಭಾವಗೀತೆ ಕವಿಯಾಗಿದ್ದವರು. 2020 ರ ಹೊತ್ತಿಗೆ, ಅವರು ಕನ್ನಡದಲ್ಲಿ 100 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ "ಹೂವಿ" ನಾಟಕವನ್ನು ಭಾರತದಲ್ಲಿ ICSE ಶೈಕ್ಷಣಿಕ ಮಂಡಳಿಯು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು !0 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವಾಗಿ ಗುರುತಿಸಿದೆ.
0 Comments